Friday, 11 December 2015

ಎಸ್ ಎಲ್ ಭೈರಪ್ಪನವರ ತಂತುವನ್ನು ನಾನೂ ಓದಿದೆ


                                  ಎಸ್ ಎಲ್ ಭೈರಪ್ಪನವರ ತಂತುವನ್ನು ನಾನೂ ಓದಿದೆ

                      ವೇದಪ್ರಕಾಶ ಎಸ್ ಎಲ್ ಭೂರಪ್ಪನವರ ತಂತುವನ್ನು ತಂದು ಕೊಟ್ಟಿದ್ದರು. ಓದಿದೆ. ಈ ತಂತುವಿಗೆ ಹಲವು ಎಳೆಗಳು, ಹಲವು ಆಯಾಮಗಳು. ಇದರಲ್ಲಿ ಬಂದಿರುವುದು  ಮುಖ್ಯವಾಗಿ ಮೂರು ವಸ್ತುಗಳು. ಶಿಕ್ಷಣ, ಭ್ರಷ್ಟಾಚಾರ ಮತ್ತು ಲೈಂಗಿಕ ಸಂಬಂಧಗಳು. ಈ ಮೂರು ಎಳೆಗಳನ್ನು ಹೆಣೆದು ಸಿದ್ಧವಾಗಿದೆ ತಂತುವಿನ ಹರಹು. ಬಿಡಿಬಿಡಿಯಾಗಿಟ್ಟುಕೊಂಡರೆ ರಾಜಕೀಯ ಸಂಗೀತಗಳೂ ಸೇರಿ ಸಿತಾರ್ ಸಿದ್ಧವಾಗುತ್ತದೆ.
                     ಒಂದು ದಶಕದ ಅವಧಿಯಲ್ಲಿ ಈ ಕ್ಷೇತ್ರಗಳಲ್ಲಾದ ಬದಲಾವಣೆಗಳು ಇಲ್ಲಿ ಸುಂದರವಾಗಿ ಚಿತ್ರಿತವಾಗಿವೆ. ಭ್ರಷ್ಟಾಚಾರದ ದಾವೆಯೊಂದರಲ್ಲಿಅಲಹಾಬಾದ್ ನ್ಯಾಯಾಲಯವು ಶ್ರೀಮತಿ ಇಂದಿರಾಗಾಂಧಿಯವರನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ಅವರನ್ನು ಲೋಕಸಭಾಸ್ಥಾನದಿಂದ ಹೊರಹಾಕಿದ್ದು ಕಾದಂಬರಿಯಲ್ಲಿ ಬರುವುದರಿಂದ ಕಥೆಗೆ ಒಂದು ರೀತಿಯ ಅಥೆಂಟಿಸಿಟಿ ಬಂದಿದೆ. ಅಭಿವೃದ್ಧಿ-ವಿಕಾಸಗಳೆಂಬ ಓಟದಲ್ಲಿ ನಾವು ಏನನ್ನು ಕಳೆದುಕೊಂಡಿದ್ದೇವೆ ಏನನ್ನು ಗಳಿಸಿದ್ದೇವೆ ಎಂಬ ಚಿತ್ರಗಳೂ ಇಲ್ಲಿ ಮನಂಬುಗುತ್ತವೆ.
                           ವಿದ್ಯಾರ್ಥಿಗಳೇ ಮಣ್ಣಿನಿಂದ ಕಟ್ಟಿದ ಕಟ್ಟಡದಲ್ಲಿ ನಡೆಯುತ್ತಿದ್ದ ಶಾಲೆ ಹೊಸ ರೀತಿಯ ಶಿಲ್ವನ್ನ ಅಳವಡಿಸಿಕೊಂಡು, ಹೊಸ ಗಟ್ಟಿ ಸಾಮಗ್ರಿಗಳಿಂದ ವೈಭವಯುತವಾಗಿ ಮಾರ್ಪಡುತ್ತದೆ.ಆ  ಹಳ್ಳಿಯ ಮಕ್ಕಳೇ ಸೇರಿ ಕಲಿಯುತ್ತಿದ್ದ ತರಗತಿಗಳಲ್ಲಿ ಭಾರತಾದ್ಯಂತದಿಂದ ಶ್ರೀಮಂತ ಕುಟುಂಬಗಳ ಮಕ್ಕಳು ಬಂದು ಸೇರುತ್ತಾರೆ. ಬಯಸುವ ಅಧ್ಯಾಪಕರಿಗೆ ಕೈತುಂಬ ಸಂಬಳ ದರಕುತ್ತದೆ. ಪಾರಂಪರಿಕ ನೀತಿಯ ಚೌಕಟ್ಟು, ಪರಿಶ್ರಮದ ಬೆಲೆ, ಒಟ್ಟಾಗಿ ಇದ್ದುದನ್ನೇ ಹಂಚಿಕೊಂಡು ತಿನ್ನುವ ಸಮುದಾಯ ಭಾವ ಕ:ಳೆದು ಹೋಗುತ್ತವೆ. ಹೊಸ ರಾಜಕೀಯ ವ್ಯವಸ್ಥೆ, ನಾಯಕರಿಗೆ ಸೌಲಭ್ಯ ಗಳ ಸುರಿಮಳೆ ಇರುವ ಜೀವನ, ಅಂತಹವರಿಗೆ ಉದ್ದಾಮತೆಯ ಹೆಸರು ಎಲ್ಲ ಸಿಗುತ್ತವೆ. ಕಷ್ಟಪಟ್ಟು ದುಡಿದೇ ತಿನ್ಬೇಕೆಂಬ ಛಲ. ಇನ್ನೊಬ್ಬರನ್ನು ಶೋಷಿಸಬಾರದೆಂಬ ವ್ರತ, ಸಮಾಜಕ್ಕಾಗಿ ತನ್ನ ದುಡಿಮೆಯೆಲ್ಲವನ್ನಾದರೂ ನೀಡಿ ಸಹವರ್ತಿಗಳ ಬಾಳು ಹಸನಾಗುವಂತೆ ಮಾಡಬೇಕೆಂಬ ಕಳಕಳಿ ನಷ್ಟವಾಗಿದೆ. ಲೈಂಗಿಕತೆಯೂ ಇತರ ಆವಶ್ಯಕತೆಗಳಂತೆಯೇ ಇನ್ನೊಂದು ಆವಶ್ಯಕತೆ ಎಂದು ಭಾವಿಸಿ ಸ್ವಚ್ಛಂದ ಲೈಂಗಿಕ ಸಂಬಂಧಗಳ ಹೊಸ ಜೀವನ ಪ್ರಾರಂಭವಾಗುತ್ತದೆ. ಮನೋನೆಮ್ಮದಿ, ಕೌಟುಂಬಿಕ ಸಂತೋಷ ಮತ್ತು ಮುಂದಿನ ಪೀಲೀಗೆಗೆ ಕುಟುಂಬವ್ಯವಹಾರಗಳ ನೆಲೆಗಟ್ಟು ಇಲ್ಲವಾಗುತ್ತದೆ.
                                 ಮೇಲನವುಗಳನ್ನೆಲ್ಲ ಒಂದೊಂದೇ ಪಾತ್ರದಲ್ಲಿ ಗುರತಿಸಿಯೂ ಕಾಣಬಹುದು ಒಟ್ಟಾಗಿ ಕಾದಂಬರಿಯಲ್ಲಿ ವಿವಿಧ ಪಾತ್ರಗಳ  ಒಡನಾಟದಲ್ಲಿಯೂ ಗುರುತಿಸಬಹುದು. ಇದು ಕಾದಂಬರಿಯ ವೈಶಿಷ್ಟ್ಯ.

No comments:

Post a Comment